BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ
ಬೆಳಗ್ಗೆ 11.29ಕ್ಕೆ ಹೊಸಹಳ್ಳಿಗೆ ಆಗಮಿಸಲಿರುವ ಅವರು ಸಂಜೆಯವರೆಗೆ ನಿಖಿಲ್ ಪರ ಮತಯಾಚಿಸಿ ಪ್ರಚಾರ ನಡೆಸಲಿದ್ದಾರೆ.ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇಂದು ಚನ್ನಪಟ್ಟಣ ಕ್ಷೇತ್ರದ ವಿವಿಧೆಡೆ ಯದುವೀರ್ ಪ್ರಚಾರ ನಡೆಸಲಿದ್ದಾರೆ.ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ….